ಪೋಸ್ಟ್‌ಗಳು

ಜುಲೈ, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

16. ಕುಸಿಯುತ್ತಿರುವ ಅಮೃತ ಸೌಧ

ಇಮೇಜ್
ಅಜ್ಜಂಪುರದ  ಅಮೃತಮಹಲ್  ಪಶು ಸಂವರ್ಧನಾ ಕೇಂದ್ರ    ಇತಿಹಾಸ ಮತ್ತು ವಾಸ್ತವ ಅಜ್ಜಂಪುರದಲ್ಲಿರುವ ಅಮೃತ ಮಹಲ್  ಪಶು  ಸಂವರ್ಧನಾ   ಕೇಂದ್ರವು ನಮ್ಮ ದೇಶದ ಸಂದರ್ಭದಲ್ಲಿ ವಿಶಿಷ್ಟವಾದುದು.  ಅಜ್ಜಂಪುರದ ಅಮೃತಮಹಲ್ ಪಶು ಸಂವರ್ಧನಾ ಕೇಂದ್ರದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ ಡಾ. ಟಿ.ಎಸ್. ಕೃಷ್ಣಮೂರ್ತಿ, (ನಿವೃತ್ತ ಜಂಟಿ ನಿರ್ದೇಶಕರು, ಪಶುಪಾಲನಾ ಇಲಾಖೆ) ಗಳನ್ನು ಕಳೆದ ಡಿಸೆಂಬರ್ ನಲ್ಲಿ ಬೆಂಗಳೂರಿನ ಮತ್ತೀಕೆರೆಯ ಅವರ ನಿವಾಸದಲ್ಲಿ ಸಂದರ್ಶಿಸಿ, ಸಂಗ್ರಹಿಸಿದ ಮಾಹಿತಿಗಳನ್ನು ಇಲ್ಲಿ ನೀಡಿದ್ದೇನೆ. ಅವರು ತಮ್ಮ ಅಧಿಕಾರಾವಧಿಯಲ್ಲಿ ಕಾರ್ಯಾಲಯದಲ್ಲಿ ಕೆಲಸಮಾಡುತ್ತಿದ್ದಂತೆಯೇ, ಊರಿನ ಪ್ರಗತಿ ಮತ್ತು ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದರು. ತಮ್ಮ ಕಾರ್ಯಕ್ಷೇತ್ರದಲ್ಲಿ ಹೊಂದಿರುವ ಪರಿಣತಿಯು ವೃತ್ತಿಯ ಅವಶ್ಯಕತೆ ಇರಬಹುದಾದರೂ,  ತಮ್ಮ ಇಲಾಖೆಯು,  ರೈತರೊಡನೆ ಹೊಂದಿದ್ದ   ಸಂಬಂಧವು  ಸಾಮಾಜಿಕ ಆರೋಗ್ಯಕ್ಕೆ ಪೂರಕವಾಗಿ ಹೇಗಿತ್ತೆಂಬುದನ್ನು ನಿರೂಪಿಸಿದರು. ರೈತರಿಂದ ಇಲಾಖೆಯು ಕಲಿಯುವುದಷ್ಟೇ ಅಲ್ಲ, ರೈತರು ಈ ಇಲಾಖೆ ತಮ್ಮದೆಂಬ ಭಾವನೆ ಬೆಳೆಯಲು, ಹಿಂದಿನ ಸರಕಾರಗಳ ನೀತಿಯಿತ್ತು, ಅವುಗಳಲ್ಲಿ ಅಡಗಿದ ವಿಶಾಲ ಭಾವನೆಯನ್ನು ಅವರಿಗೆ ಮನವರಿಕೆ ಮಾಡಿಸಲು, ತಮ್ಮ ಆಡಳಿತಾವಧಿಯಲ್ಲಿ ಹೇಗೆಲ್ಲ ಕೆಲಸಮಾಡಲಾಯಿತೆಂದು ವಿವರಿಸಿದರು. ಅವರ ಕಾರ್ಯಕ್ಷೇತ್ರದ ಪ್ರಮುಖ ವ್ಯಾಪ್ತಿಯು ಪಶುಪಾಲನೆಗೆ ಸಂಬಂಧಿಸಿದ್ದಾದರೂ, ವ