ಪೋಸ್ಟ್‌ಗಳು

ಏಪ್ರಿಲ್, 2014 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪೂರ್ಣ ಬೆಳಗುವ ಮುನ್ನ ಆರಿತೇ ಜ್ಯೋತಿ !

ಇಮೇಜ್
ಆತ್ಮೀಯ ಓದುಗರೇ ,  "ಎಲ್ಲರಿಗೂ ಜಯ ನಾಮ ಸಂವತ್ಸರದ ಶುಭಾಶಯಗಳು" ಅಜ್ಜಂಪುರದ ಪುರಪ್ರಮುಖರಲ್ಲಿ ಓರ್ವರಾದ  ಶ್ರೀ ಸುಬ್ರಹ್ಮಣ್ಯ ಶೆಟ್ಟರ ಪುತ್ರ ಶ್ರೀ ರಾಜಗೋಪಾಲ ಗುಪ್ತ ಇತ್ತೀಚೆಗೆ ಎಂದರೆ   ದಿನಾಂಕ   19-12-2013 ರಂದು ತಮ್ಮ 66 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅಜ್ಜಂಪುರದ ಸಾಮಾಜಿಕ ವಲಯದಲ್ಲಿ   ತಮ್ಮ ತಂದೆಯವರ ಹೆಸರಿನ ಬಲಕ್ಕಿಂತ ಹೆಚ್ಚಾಗಿ , ತಮ್ಮ ಸೌಮ್ಯ ಸ್ವಭಾವ ಮತ್ತು ತೋರುತ್ತಿದ್ದ ಸಾಮಾಜಿಕ   ಕಾಳಜಿಗಳಿಂದಾಗಿ ಗಮನಾರ್ಹ ವ್ಯಕ್ತಿಯಾಗಿದ್ದರು. ಅವರನ್ನು ಸಮೀಪದಿಂದ ನೋಡಿಬಲ್ಲ , ಒಡನಾಡಿಯಾಗಿದ್ದ ಗೆಳೆಯ ಶ್ರೀ   ಅಜ್ಜಂಪುರ ಮಂಜುನಾಥ ಹಾಗೂ ಅಜ್ಜಂಪುರದ ಪವಿತ್ರ ಪ್ರಿಂಟರ್ಸ್ ಮಾಲಕ  ಮತ್ತು  ಪತ್ರಕರ್ತರಾದ ಶ್ರೀ ಎನ್. ವೆಂಕಟೇಶ್ ಇವರೀರ್ವರೂ ತಮ್ಮ ಪದಶ್ರದ್ಧಾಂಜಲಿಯನ್ನು ಈ ಲೇಖನಗಳಲ್ಲಿ ದಾಖಲಿಸಿದ್ದಾರೆ.   - ಶಂಕರ ಅಜ್ಜಂಪುರ ನಮ್ಮೆಲ್ಲರ ಪ್ರೀತಿಯ ಅಣ್ಣ ರಾಜಗೋಪಾಲ ಇನ್ನಿಲ್ಲ ,   ಎನ್ನುವುದನ್ನು ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತದೆ. ಹಾಗೆ ನೋಡಿದರೆ ,   ಅವನ ಜೀವನವೇ ಒಂದು ಸವಾಲು. ತುಂಬ ಪ್ರತಿಭಾವಂತರಾದ -ಕ್ರಿಯಾಶೀಲರಾದ - ಚೈತನ್ಯಶೀಲರಾದ ,   ತಂದೆ-ತಾಯಿಯ ಏಕೈಕ ಪುತ್ರ ಎನ್ನುವುದು ಸಹ ಸವಾಲೇ. ಉದ್ಯಮಶೀಲತೆಯ - ಚಟುವಟಿಕೆಯ - ಕಲಾಪೋಷಕರಾದ - ರಾಜಕಾರಣಿಯೂ ಆದ ಸುಬ್ರಹ್ಮಣ್ಯ ಶೆಟ್ಟರ ಮಗ ಎಂದರೆ ಸಹಜವಾಗಿ ನಿರೀಕ್ಷೆ ಹೆಚ್ಚಾಗಿಯೇ ಇರುತ್ತದೆ. ಇನ್ನು ತ