ಮರೆಯಾದ ಗ್ರಾಮೀಣ ಕಸುಬು - ಹಲ್ಲೆ ಹೊಡೆಯುವವರು ಹೋದರೆಲ್ಲಿ ?
![ಇಮೇಜ್](https://blogger.googleusercontent.com/img/b/R29vZ2xl/AVvXsEjlNDZRy5H1qfgNDlXrOngqq6Im7TV0Sm9H0aD5iUqLu2g71WrA-5YA0k3uyM6yX5sa5JZaJ7LZz0aAL-YJqaDdQDtuqOjXzw4Bu61fYNNbT6jk1LGHK2NukT39vbEmXxEXgwAbmPnkdus/s1600/Me.jpg)
ಆತ್ಮೀಯ ಓದುಗರೇ, ಬಾಲ್ಯದ ನೆನಪುಗಳು ಯಾವಾಗಲೂ ಗಾಢ ಮತ್ತು ತೀವ್ರ. ಅದು ನೆನಪಿನ ಸಂಗ್ರಹದಿಂದ ಸುಲಭವಾಗಿ ಮಸಳಿಹೋಗದು. ನನ್ನ ಬಾಲ್ಯದಲ್ಲಿ ಎತ್ತುಗಳ ಕಾಲಿಗೆ ಹಲ್ಲೆ ಹೊಡೆಯುವ ಕೆಲಸವನ್ನು ಗಂಟೆಗಟ್ಟಲೆ ನೋಡುತ್ತ ನಿಲ್ಲುತ್ತಿದ್ದೆ. ಆಧುನಿಕತೆಯ ಭರಾಟೆಯಲ್ಲಿ ಮರೆಯಾಗುತ್ತಿರುವ ಈ ಕಸುಬು ಕೊನೆಯುಸಿರು ಎಳೆಯುತ್ತಿರುವ ಈ ದಿನಗಳಲ್ಲಿ ಸ್ಮರಣೆಗೆ ಬಂದಿತು. ನನ್ನ ಸಮಕಾಲೀನರು, ಹಿರಿಯರಿಗೆ ಇದೊಂದು ನೆನಪು ಮಾತ್ರವಾದರೆ, ಹಿಂದೆ ಹೀಗಿತ್ತು ಎಂಬ ಮಾಹಿತಿಯಾದರೂ ಕಿರಿಯರಿಗೆ ದೊರಕಲಿ ಎಂಬ ಉದ್ದೇಶದ ಈ ಬರಹ ನಿಮಗೆ ಇಷ್ಟವಾಯಿತೇ, ಬರೆದು ತಿಳಿಸಿ. ವಂದನೆಗಳೊಡನೆ, ಶಂಕರ ಅಜ್ಜಂಪುರ ಇ-ಮೇಲ್ - shankarajp@gmail.com --------------------------------------------------------------------------------------------------------------------------------------------------------------------------------------------- ಹಲ್ಲೆ ಅಥವಾ ಲಾಳ - ಎತ್ತುಗಳ ಪಾದರಕ್ಷೆ ಅಜ್ಜಂಪುರದಲ್ಲಿ ಮುಸಲ್ಮಾನರ ವಸತಿ ಪ್ರದೇಶವು ಹಿಂದೆ ಬ್ರಾಹ್ಮಣರು ಹೆಚ್ಚಾಗಿ ಇರುತ್ತಿದ್ದ ಪ್ರದೇಶಕ್ಕೆ ಹೊಂದಿಕೊಂಡಂತಿದೆ. ಪ್ರಗತಿಯ ದೃಷ್ಟಿಯಿಂದ ಹೇಳುವುದಾದರೆ, ಮುಸಲ್ಮಾನರದೇ ಹೆಚ್ಚು ಎನ್ನಬಹುದು. ಇದನ್ನೇನೂ ಅಸೂಯೆಯಿಂದ ಹೇಳುತ್ತಿಲ್ಲ. ತಮ್ಮ ಶ್ರಮ ಜೀವನ ಮತ್ತು ಸರಕಾರಗಳ ಬೆಂಬಲದ ಫಲವಾಗಿ ಅವರು ಹೊಂದಿರುವ ಅಭ