ಪೋಸ್ಟ್‌ಗಳು

2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

121. ಅಜ್ಜಂಪುರ ತಾಲೂಕಿಗೆ ರಾಜ್ಯೋತ್ಸವ ಪ್ರಶಸ್ತಿಯ ಮೂರನೇ ಗರಿ : ಕೃಷಿಋಷಿ ಎಸ್.ಚಂದ್ರಶೇಖರ್ ನಾರಣಾಪುರ

ಇಮೇಜ್
ಅಜ್ಜಂಪುರ ತಾಲೂಕು ಆದ ನಂತರ ಸ್ವಾಭಾವಿಕವಾಗಿ ವ್ಯಾಪ್ತಿಯು ವಿಸ್ತಾರವಾಗಿದೆ. ಅಂತೆಯೇ ಅಜ್ಜಂಪುರದ ಸಾಧಕರ ಹಿರಿಮೆಯು ಬೆಳೆಯುತ್ತಿರುವುದು ಸಂತೋಷದ ಸಂಗತಿ. ಅಜ್ಜಂಪುರದ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಸುಬ್ರಹ್ಮಣ್ಯ ಶೆಟ್ಟರು ಹಾಗೂ ಕಳೆದ ವರ್ಷ ರಾಜ್ಯೋತ್ಸವ ಪ್ರಶಸ್ತಿ ಗೆ ಭಾಜನರಾದ ಅಜ್ಜಂಪುರ ಮಂಜುನಾಥ್ ಅವರು ಸೇರಿದಂತೆ, ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಶ್ರೀ ಚಂದ್ರಶೇಖರ್ ಅವರಿಗೆ 2022ನೇ ಸಾಲಿಗೆ ಸಂದಿರುವ ರಾಜ್ಯೋತ್ಸವ ಪ್ರಶಸ್ತಿಯು  ಮೂರನೆಯದಾಗಿದೆ. ಅವರನ್ನು ನೇರವಾಗಿ ಮಾತನಾಡಿಸಿ ಸಂದರ್ಶನ ಪಡೆಯುವ ಅವಕಾಶ ಆಗದಿದ್ದರೂ ಮಿತ್ರ ಅಪ್ಪಾಜಿ ಅಜ್ಜಂಪುರ ಅವರು ಚಿತ್ರ ಮಾಹಿತಿಗಳನ್ನು ಸಂಗ್ರಹಿಸಿ ಈ ಲೇಖನವನ್ನು ಸಿದ್ಧಪಡಿಸಿದ್ದಾರೆ. ಅವರಿಗೆ ಕೃತಜ್ಞತೆಗಳು. ಚಂದ್ರಶೇಖರ ನಾರಣಾಪುರ ಅವರಿಗೆ ಅಭಿನಂದನೆಗಳು. ಶಂಕರ ಅಜ್ಜಂಪುರ ಸಂಪಾದಕ ಅಂತರಜಾಲದಲ್ಲಿ ಅಜ್ಜಂಪುರ - ೦-೦-೦-೦-೦-೦ - ಅಜ್ಜಂಪುರ ತಾಲೂಕಿಗೆ ರಾಜ್ಯೋತ್ಸವ ಪ್ರಶಸ್ತಿಯ ಮೂರನೇ ಗರಿ : ಕೃಷಿ ಋಷಿ ಚಂದ್ರಶೇಖರ ನಾರಣಾಪುರ ಕೃಷಿ ಕ್ಷೇತ್ರದ ಸಾಧನೆಗಾಗಿ  ಚಂದ್ರಶೇಖರ ನಾರಣಾಪುರ ಅವರಿಗೆ  ೨೦೨೨ನೆಯ ಸಾಲಿನ  ರಾಜ್ಯೋತ್ಸವ ಪ್ರಶಸ್ತಿಯನ್ನು ಕರ್ನಾಟಕ ಸರಕಾರವು  ನೀಡಿ ಗೌರವಿಸಿದೆ. ಸಾವಯವ ಕೃಷಿಯಲ್ಲಿ ಅವರು ಪರಿಣತರು. ತಮ್ಮ ಕೃಷಿ ಕ್ಷೇತ್ರದಲ್ಲಿ ಸಾವಯವ ಕೃಷಿಯ ಅನೇಕ ಪ್

120. ಶಿಕ್ಷಣವೇತ್ತ, ವಿದ್ಯಾಭಿಮಾನಿ ಶ್ರೀ ನರಸೀಪುರ ದೊಡ್ಡಮನೆ ನಾಗರಾಜ್ (ಎನ್.ಡಿ.ಎನ್.)

ಇಮೇಜ್
  ಶಿಕ್ಷಣವೇತ್ತ, ವಿದ್ಯಾಭಿಮಾನಿ ಶ್ರೀ ನರಸೀಪುರ ದೊಡ್ಡಮನೆ ನಾಗರಾಜ್ (ಎನ್.ಡಿ.ಎನ್.) ಅಜ್ಜಂಪುರದ ಶೆಟ್ರು ಶಿದ್ದಪ್ಪನವರ ಪದವೀಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ, ಅಜ್ಜಂಪುರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ, ನಿವೃತ್ತಿಯ ನಂತರ ತರೀಕೆರೆಯಲ್ಲಿ ನೆಲೆಸಿದ್ದ ಎನ್.ಡಿ. ನಾಗರಾಜರು ನಿಧನರಾಗಿದ್ದಾರೆ. ಎನ್.ಡಿ.ಎನ್. ಎಂಬ ಸಂಕ್ಷಿಪ್ತ ನಾಮದಿಂದ ಹೆಸರಾಗಿದ್ದ ನಾಗರಾಜರ ಹೆಚ್ಚಿನ ಪರಿಚಯ ನನಗೆ ಇರಲಿಲ್ಲವಾದರೂ, ನನ್ನ ತಂದೆ ಅಜ್ಜಂಪುರ ಕ್ಷೇತ್ರಪಾಲಯ್ಯನವರಿಗೆ ಅವರು ಆಪ್ತರು. ವಿದ್ಯಾಭಿಮಾನಿಗಳಾಗಿದ್ದ ನನ್ನ ತಂದೆಯನ್ನು ಕಂಡರೆ ನಾಗರಾಜರಿಗೂ ಅದೇ ಬಗೆಯ ಗೌರವ. ನಾನು ಅವರನ್ನು ಒಂದೆರಡು ಬಾರಿ ಕಂಡು ಮಾತನಾಡಿದ್ದುಂಟು. ಆಗೆಲ್ಲ ನನ್ನ ತಂದೆಯನ್ನು ಪ್ರೀತಿಯಿಂದ ಸ್ಮರಿಸಿದ್ದರು.. ಸ್ವತಃ ಆಂಗ್ಲ ಪ್ರಾಧ್ಯಾಪಕರಾಗಿದ್ದ ನಾಗರಾಜರಿಗೆ ಸಾಹಿತ್ಯ, ಸಂಸ್ಕೃತಿ, ಕಲೆಗಳಲ್ಲಿ, ರಂಗಭೂಮಿಗಳ ಬಗ್ಗೆ ಅಪಾರ ಅಭಿಮಾನ. ನಿವೃತ್ತಿಯ ನಂತರವೂ ಸಂಸ್ಕೃತದ ಅಧ್ಯಯನದಲ್ಲಿ ತೊಡಗಿದ್ದರು. ನಾನೊಮ್ಮೆ ಇಂಗ್ಲಿಷ್ ಬರಹವೊಂದರ ಪರಿಷ್ಕರಣೆಗಾಗಿ ಅವರನ್ನು ಕೋರಿದಾಗ, ಸಮಯಾಭಾವದಿಂದ ಸಾಧ್ಯವಾಗಲಾರದು ಎಂದು ತುಂಬ ಸಂಕೋಚದಿಂದ ಹೇಳಿಕೊಂಡಿದ್ದರು. ಪ್ರತಿ ಹಬ್ಬಗಳಿಗೂ ಶುಭಾಶಯ ಕೋರುತ್ತಿದ್ದ ಆತ್ಮೀಯರೊಬ್ಬರು ಮರೆಯಾಗಿದ್ದಾರೆ. ಅವರ ಅಧ್ಯಯನಶೀಲತೆ, ಶಿಕ್ಷಣದ ಬಗೆಗಿನ ಪ್ರೀತಿ, ವಿದ್ಯಾರ್ಥಿಗಳನ್ನು ಕುರಿತಾದ ಕಾಳಜಿಗಳಿಂದಾಗಿ ಅವರು ನನ್ನೂರಿನ ವಿದ್ಯಾವಲಯದಲ್ಲಿ ತುಂಬ ಜನಪ್ರಿಯರಾ