ಪೋಸ್ಟ್‌ಗಳು

ಅಜ್ಜಂಪುರ ಜಿ ಸೂರಿ

ಇಮೇಜ್
ನಾನು ಈ ಬ್ಲಾಗ್ ನ್ನು ಆರಂಭಿಸಿದಾಗಿನಿಂದ ಹಲವರು ಅಜ್ಜಂಪುರ ಸೂರಿಯವರ ಬಗ್ಗೆ ನೀವೇಕೆ ಇನ್ನೂ ಲೇಖನ ಪ್ರಕಟಿಸಿಲ್ಲ ಎಂದು ಅನೇಕರು  ನನ್ನನ್ನು ಕೇಳುತ್ತಿದ್ದರು. ನಾನು ಅಜ್ಜಂಪುರದಲ್ಲಿ ಇದ್ದ ಸಮಯದಲ್ಲಿ ಅವರ ಅನುವಾದಿತ ಕಥೆ-ಕಾದಂಬರಿಗಳ ಬಗ್ಗೆ ಕೇಳುತ್ತಿದ್ದೆನಾದರೂ,  ಅವರನ್ನು ಭೇಟಿಮಾಡಿ ಮಾತನಾಡುವಷ್ಟು ಸಂಪರ್ಕವಿರಲಿಲ್ಲ. ನಮ್ಮೂರಿನ ಹೆಸರನ್ನು ತಮ್ಮ ಸಾಹಿತ್ಯ ಚಟುವಟಿಕೆಗಳಿಂದ ಜನರ ಮನಸ್ಸಿನಲ್ಲಿ ಮೂಡಿಸಿದ ಸೂರಿಯವರ ಬಗ್ಗೆ ಬರೆಯಬೇಕೆಂಬುದು  ಅನೇಕ ವರ್ಷಗಳ ಆಶಯ. ಮುಂದೆ, ಮಿತ್ರ ಮಲ್ಲಿಕಾರ್ಜುನರು, ಸೂರಿಯವರ ಪುತ್ರನನ್ನು ಸಂಪರ್ಕಿಸಿ ಮಾಹಿತಿ ಕೊಡುವುದಾಗಿಯೂ ತಿಳಿಸಿದ್ದರು. ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಅವರ ಬಗ್ಗೆ ಅಂತರ್ಜಾಲದಲ್ಲಿ ಹುಡುಕುತ್ತಿದ್ದಾಗ ದೊರೆತ ಸವಿವರ-ಸಚಿತ್ರ ಮಾಹಿತಿಗಿಂತ ಹೆಚ್ಚಿನದೇನೂ ಬೇಕಿರಲಿಲ್ಲ. ಹೀಗಾಗಿ ಕಣಜದಲ್ಲಿ ದೊರೆತ ಈ ಲೇಖನವನ್ನು ಕೃತಜ್ಞತಾಪೂರ್ವಕವಾಗಿ ಇಲ್ಲಿ ಪ್ರಕಟಿಸಿರುವೆ.  - ಶಂಕರ ಅಜ್ಜಂಪುರ  ಕವಿ , ವಚನಕಾರ , ಕಾದಂಬರಿಕಾರ , ಅನುವಾದಕ ಎಲ್ಲಕ್ಕಿಂತ ಹೆಚ್ಚಾಗಿ ಸಹೃದಯ ಸಾಹಿತಿ ಎನಿಸಿಕೊಂಡಿದ್ದ ಜಿ. ಸೂರ್ಯನಾರಾಯಣರವರು ಹುಟ್ಟಿದ್ದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಅಜ್ಜಂಪುರದಲ್ಲಿ 1939 ರ ಏಪ್ರಿಲ್‌ 17 ರಂದು. ತಂದೆ   ಗೋವಿಂದಪ್ಪನವರು ಮತ್ತು ತಾಯಿ ಪಾರ್ವತಮ್ಮನವರು. ತಂದೆಯವರದು ಮೂಲತಃ ಬಳೆಮಾ...

ಇತಿಹಾಸದ ಪುಟ ಸೇರಿದ ಅಜ್ಜಂಪುರದ ಖಾದಿ ಗ್ರಾಮೋದ್ಯೋಗ ಭಂಡಾರ

ದೇಶದ ಎಲ್ಲ ಚಿಕ್ಕ ಹಳ್ಳಿ, ಪಟ್ಟಣ, ನಗರಗಳಂತೆ ಸ್ವಾತಂತ್ರ್ಯ ಸಂಗ್ರಾಮದ ವಿಷಯದಲ್ಲಿ ಅಜ್ಜಂಪುರದ ಮೇಲೆ ಕೂಡ ಅದರ ಪ್ರಭಾವವಿತ್ತು. ಹೀಗಾಗಿಯೇ ಆ ಚಳವಳಿಯಲ್ಲಿ ಅಜ್ಜಂಪುರದ ಅನೇಕರು ಭಾಗವಹಿಸಿದರು. ಶ್ರೀ ಸುಬ್ರಹ್ಮಣ್ಯ ಶೆಟ್ಚರು ಅಜ್ಜಂಪುರದ ಮಟ್ಟಿಗೆ ಆ ದಿನಗಳಲ್ಲಿ ಸ್ಥಳೀಯ ಗಾಂಧಿಯೇ ಆಗಿದ್ದರು ಎಂದರೆ ಅತಿಶಯೋಕ್ತಿಯಲ್ಲ. ಅವರ ಮಾತಿಗೆ ಆ ಮಟ್ಟಿನ ಮನ್ನಣೆಯಿತ್ತು. ಗಾಂಧೀಜಿಯವರ ಚಿಂತನೆಗಳಲ್ಲಿ ಸ್ವಾವಲಂಬನೆ, ಖಾದಿ, ಕೃಷಿಗೆ ಬೆಂಬಲ ಮುಂತಾದ ಅನೇಕ ಸಂಗತಿಗಳು ಸೇರಿದ್ದವಷ್ಟೇ. ಅದರಲ್ಲಿ ಖಾದಿ ತಯಾರಿಕೆ ಮತ್ತು ಅದರ ಬಳಕೆ ಬಗ್ಗೆ ಅಜ್ಜಂಪುರದಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ ಕೂಡ ಸಾಕಷ್ಟು ಕೆಲಸಗಳು ನಡೆದವು. ನಾನು ಶಿವಮೊಗ್ಗೆಯಲ್ಲಿ ನೆಲೆಸಿದ ನಂತರ ನಿಧಾನವಾಗಿ ನನ್ನ ಬಡಾವಣೆಯ ಜನರ ಪರಿಚಯವಾಗುತ್ತಾ ಬಂದಿತು. ಆ ಹಂತದಲ್ಲಿ ಶ್ರೀ ಹುಚ್ಚಪ್ಪ ಎನ್ನುವವರ ಪರಿಚಯವೂ ಆಯಿತು. ನನ್ನ ಪರಿಚಯ ಹೇಳಿಕೊಳ್ಳುವಾಗ ನಾನು ಅಜ್ಜಂಪುರದವನು ಎಂದು ಹೇಳಿದ್ದೇ ತಡ, ಅವರ ಪ್ರತಿಕ್ರಿಯೆಯಲ್ಲಿ ತುಂಬ ಉತ್ಸಾಹ ಮೂಡಿದ್ದು ಕಾಣಿಸಿತು. ಅವರು ಹೇಳಿದರು – “ ಸ್ವಾಮೀ, ನಾನು ಕೂಡ ಅಜ್ಜಂಪುರದಲ್ಲಿ ಖಾದಿ ಮಂಡಲಿಯಲ್ಲಿ ಕೆಲಸದಲ್ಲಿದ್ದವ. ಅಂದಿನ ದಿನಗಳನ್ನು ನೆನೆಸಿಕೊಳ್ಳುವುದೇ ಒಂದು ಸಂತಸ, ಏಕೆಂದರೆ, ಯಾವ ಕೈಗಾರಿಕೆಯೂ ಇರದಿದ್ದ ನಿಮ್ಮ ಊರಿನಲ್ಲಿ ನಮ್ಮ ಖಾದಿ ಸಂಸ್ಥೆಯೊಂದೇ ಹೇಳಿಕೊಳ್ಳಬಹುದಾಗಿದ್ದ ಒಂದು ಕೈಗಾರಿಕೆ. ಅದೀಗ ನಶಿಸಿ ಹ...

ಮಹಾರಾಜರ ಕಟ್ಟೆ !

ಇಮೇಜ್
  ಅಜ್ಜಂಪುರದ ಶೆಟ್ಟರ ಸಿದ್ಧಪ್ಪನವರ ಪ್ರೌಢಶಾಲೆ, ಕಾಲೇಜು ಆಗಿ ಪರಿವರ್ತನೆಯಾಗಿ ಅರ್ಧ ಶತಮಾನವೇ ಕಳೆದಿದೆ. ಈ ಭವ್ಯ ಕಟ್ಟಡವನ್ನು ಪ್ರವೇಶಿಸುತ್ತಿದ್ದಂತೆಯೇ ಪ್ರಾಂಗಣದಲ್ಲಿ  ಸಿಮೆಂಟಿನಿಂದ ರಚಿಸಿದ ಒಂದು ಕಟ್ಟೆ ಕಾಣುತ್ತದೆ. ಶಾಲೆಯ ಕಟ್ಟಡದ ಸುತ್ತಮುತ್ತ ಅಭಿವೃದ್ಧಿಗೆಂದು ಇದುವರೆಗೆ ಅನೇಕ ಕಾಮಗಾರಿಗಳು ನಡೆದಿವೆಯಾದರೂ, ಕಟ್ಟಡದ ಮುಂಭಾಗವನ್ನು ವಿರೂಪಗೊಳಿಸದೇ, ಅಲ್ಲಿರುವ ಕಟ್ಟೆಯನ್ನು ತೆಗೆಯದೇ ಹಾಗೆಯೇ ಉಳಿಸಿಕೊಳ್ಳಲಾಗಿದೆ. ಈ ಕಟ್ಟೆಯೊಡನೆ ಶಾಲೆಗೊಂದು ಭಾವನಾತ್ಮಕ ಸಂಬಂಧವಿದೆ.  ಮಹಾರಾಜರ ಕಟ್ಟೆ ! ಅದೆಂದರೆ ಅಜ್ಜಂಪುರದ ಪುರಸಭೆಯು 1960ರಲ್ಲಿ ಕುಡಿಯುವ ನೀರು ಸರಬರಾಜಿನ ಉದ್ಘಾಟನೆಗೆಂದು ಅಂದಿನ ಮೈಸೂರು ಮಹಾರಾಜರಾಗಿದ್ದ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರನ್ನು ಆಹ್ವಾನಿಸಿತ್ತು. ಆ ಸಂದರ್ಭದಲ್ಲಿ ಮಹಾರಾಜರು ಉನ್ನತ ಸ್ಥಾನದಲ್ಲಿ ಕಂಗೊಳಿಸಬೇಕೆಂಬ ಉದ್ದೇಶದಿಂದ ಈ ಕಟ್ಟೆಯನ್ನು ನಿರ್ಮಿಸಲಾಯಿತು. ಮಹಾರಾಜರು ಅದರ ಮೇಲೆ ನಿಂತು ತಮ್ಮ ಭಾಷಣವನ್ನು ಮಾಡಿದರು. ಆ ಸವಿನೆನಪಿಗೆಂದು ಅದನ್ನು ಇಂದಿಗೂ ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಊರಿನ ಪ್ರಮುಖರು, ಗಣ್ಯರು ಮಹಾರಾಜರನ್ನು ಸ್ವಾಗತಿಸಿದ್ದರು. ಅವರೆಲ್ಲ ಅಂದಿನ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿರುವ ಅಪೂರ್ವ ಚಿತ್ರವನ್ನು ಅಜ್ಜಂಪುರದ ಹಿರಿಯರಾದ ಶ್ರೀ ಸತ್ಯನಾರಾಯಣ ಶೆಟ್ಟರು ಕಾಪಿಟ್ಟಿದ್ದಾರೆ.  ಇತ್ತೀ...

ಶಿಕ್ಷಕ - ಶಾಸಕ ಶ್ರೀ ಪಿ. ತಿಪ್ಪಯ್ಯ

ಇಮೇಜ್
ಅತ್ಮೀಯ ಓದುಗರೇ, ಅಜ್ಜಂಪುರದ ಇತ್ತೀಚಿನ ಯುವ ಸಾಧಕರನ್ನು ಕುರಿತು ಪರಿಚಯಿಸುವ ಆಶಯವಿದೆಯಾದರೂ, ಹಿರಿಯರ ಬಗ್ಗೆ ಬರೆಯುವುದು, ತಿಳಿಯಬೇಕಾದುದು ಇನ್ನೂ ಇದೆಯೆನ್ನುವುದು ಕೂಡ ಸಂತಸದ ಸಂಗತಿಯೇ ಸರಿ. ಹೀಗಾಗಿ, ಈ ಸಂಚಿಕೆಯಲ್ಲಿ ಅಜ್ಜಂಪುರದ ಸಭ್ಯ, ಸರಳ ರಾಜಕಾರಣಿ ಮತ್ತು ಶಿಕ್ಷಕರಾದ ಶ್ರೀ ಪಿ. ತಿಪ್ಪಯ್ಯನವರನ್ನು ಕುರಿತ ಲೇಖನವಿದೆ. ಇದನ್ನು ಯುವ ಮಿತ್ರ ಮಲ್ಲಿಕಾರ್ಜುನ ಅಜ್ಜಂಪುರ ಅವರು ತಿಪ್ಪಯ್ಯನವರ ಪುತ್ರ ಶ್ರೀ ಉಮಾಶಂಕರ್ ಅವರನ್ನು ಸಂಪರ್ಕಿಸಿ, ವಿವರಗಳನ್ನು ಸಂಗ್ರಹಿಸಿ ಇಲ್ಲಿ ನೀಡಿದ್ದಾರೆ. ಅವರ ಆಸಕ್ತಿ ಹೆಚ್ಚಿನದು. ಇದೇ ರೀತಿ ಓದುಗ ಬಳಗದಲ್ಲಿರುವ ಮಿತ್ರರು ತಮ್ಮ ಗಮನಕ್ಕೆ ಬರುವ ವಿಶೇಷ ಸಂಗತಿಗಳನ್ನು. ನೆನಪುಗಳನ್ನು ಹಂಚಿಕೊಳ್ಳಲು ಕೋರುತ್ತೇನೆ.  -ಶಂಕರ ಅಜ್ಜಂಪುರ ಶಿಕ್ಷಕ - ಶಾಸಕ ಶ್ರೀ ಪಿ. ತಿಪ್ಪಯ್ಯ ಇಂದು ಸಾಹಿತಿಗಳು ರಾಜಕಾರಣಕ್ಕೆ ಬರಬೇಕೇ ಬೇಡವೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಸಾಹಿತಿಗಳು ರಾಜಕೀಯಕ್ಕೆ ಬಂದರೆ , ರಾಜಕಾರಣವು ಕೆಡುವುದಕ್ಕಿಂತ , ಸಾಹಿತಿಗಳು ಕೆಟ್ಟು ಹೋಗುತ್ತಾರೆ ಎಂಬ ಕಾಳಜಿ ವ್ಯಕ್ತವಾಗುತ್ತಿದೆ. ಹೀಗಾಗಿಯೇ ಅವರು ದೂರವಿದ್ದರೆ ಒಳಿತು ಎಂಬ ಭಾವ ಸಮಾಜದಲ್ಲಿ ನೆಲೆ ನಿಂತಿದೆ.   ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರಪತಿಯಾಗುವುದಕ್ಕಿಂತ ಮುಂಚೆ ಉಪನ್ಯಾಸಕ ರಾಗಿದ್ದವರು.   ಶಿಕ್ಷಣ ಕ್ಷೇತ್ರದಲ್ಲಿದ್ದ    ಅವರ...

ಪೂರ್ಣ ಬೆಳಗುವ ಮುನ್ನ ಆರಿತೇ ಜ್ಯೋತಿ !

ಇಮೇಜ್
ಆತ್ಮೀಯ ಓದುಗರೇ ,  "ಎಲ್ಲರಿಗೂ ಜಯ ನಾಮ ಸಂವತ್ಸರದ ಶುಭಾಶಯಗಳು" ಅಜ್ಜಂಪುರದ ಪುರಪ್ರಮುಖರಲ್ಲಿ ಓರ್ವರಾದ  ಶ್ರೀ ಸುಬ್ರಹ್ಮಣ್ಯ ಶೆಟ್ಟರ ಪುತ್ರ ಶ್ರೀ ರಾಜಗೋಪಾಲ ಗುಪ್ತ ಇತ್ತೀಚೆಗೆ ಎಂದರೆ   ದಿನಾಂಕ   19-12-2013 ರಂದು ತಮ್ಮ 66 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅಜ್ಜಂಪುರದ ಸಾಮಾಜಿಕ ವಲಯದಲ್ಲಿ   ತಮ್ಮ ತಂದೆಯವರ ಹೆಸರಿನ ಬಲಕ್ಕಿಂತ ಹೆಚ್ಚಾಗಿ , ತಮ್ಮ ಸೌಮ್ಯ ಸ್ವಭಾವ ಮತ್ತು ತೋರುತ್ತಿದ್ದ ಸಾಮಾಜಿಕ   ಕಾಳಜಿಗಳಿಂದಾಗಿ ಗಮನಾರ್ಹ ವ್ಯಕ್ತಿಯಾಗಿದ್ದರು. ಅವರನ್ನು ಸಮೀಪದಿಂದ ನೋಡಿಬಲ್ಲ , ಒಡನಾಡಿಯಾಗಿದ್ದ ಗೆಳೆಯ ಶ್ರೀ   ಅಜ್ಜಂಪುರ ಮಂಜುನಾಥ ಹಾಗೂ ಅಜ್ಜಂಪುರದ ಪವಿತ್ರ ಪ್ರಿಂಟರ್ಸ್ ಮಾಲಕ  ಮತ್ತು  ಪತ್ರಕರ್ತರಾದ ಶ್ರೀ ಎನ್. ವೆಂಕಟೇಶ್ ಇವರೀರ್ವರೂ ತಮ್ಮ ಪದಶ್ರದ್ಧಾಂಜಲಿಯನ್ನು ಈ ಲೇಖನಗಳಲ್ಲಿ ದಾಖಲಿಸಿದ್ದಾರೆ.   - ಶಂಕರ ಅಜ್ಜಂಪುರ ನಮ್ಮೆಲ್ಲರ ಪ್ರೀತಿಯ ಅಣ್ಣ ರಾಜಗೋಪಾಲ ಇನ್ನಿಲ್ಲ ,   ಎನ್ನುವುದನ್ನು ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತದೆ. ಹಾಗೆ ನೋಡಿದರೆ ,   ಅವನ ಜೀವನವೇ ಒಂದು ಸವಾಲು. ತುಂಬ ಪ್ರತಿಭಾವಂತರಾದ -ಕ್ರಿಯಾಶೀಲರಾದ - ಚೈತನ್ಯಶೀಲರಾದ ,   ತಂದೆ-ತಾಯಿಯ ಏಕೈಕ ಪುತ್ರ ಎನ್ನುವುದು ಸಹ ಸವಾಲೇ. ಉದ್ಯಮಶೀಲತೆಯ - ಚಟುವಟಿಕೆಯ - ಕಲಾಪೋಷಕರಾದ - ರಾಜಕಾರಣಿಯೂ ಆದ ಸುಬ್ರಹ್ಮಣ್ಯ ಶೆಟ್ಟರ ...